ಕಲಬುರಗಿಜಿಲ್ಲಾಸುದ್ದಿ

ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಲು: ಸಾಲಿ ಆಗ್ರಹ

ಚಿತ್ತಾಪುರ: ಮತಕ್ಷೇತ್ರದ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಗುರುವಾರ ರಾತ್ರಿ ಕೋಲಿ, ಕಬ್ಬಲಿಗ ಸಮಾಜದ ಕುಲಗುರು ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿ ತಾಲೂಕು ಕೋಲಿ ಸಮಾಜದ ನೇತೃತ್ವದಲ್ಲಿ ಶನಿವಾರ ಪಟ್ಟಣದ ಲಾಡ್ಡಿಂಗ್ ಕ್ರಾಸ್ ಹತ್ತಿರ ಮಾನವ ಸರಪಳಿ ನಿರ್ಮಿಸಿ ಟೈರ್ ಗೆ ಬೆಂಕಿ ಹಚ್ಚಿ, ರಸ್ತೆ ತಡೆ ಪ್ರತಿಭಟನೆ ನಡೆಸಿದ ಮುಖಂಡರು ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ನಂತರ ಕೋಲಿ ಸಮಾಜದ ಹಿರಿಯ ಮುಖಂಡ ಹಾಗೂ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿ, ಮುತ್ತಗಾ ಗ್ರಾಮದಲ್ಲಿ ಸ್ಥಾಪಿಸಿದ್ದ ಕೋಲಿ, ಕಬ್ಬಲಿಗ ಸಮಾಜದ ಕುಲಗುರು ನಿಜಶರಣ ಶ್ರೀಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಕಿಡಿಗೇಡಿಗಳು ಅ. 9 ರಂದು ರಾತ್ರಿ ಭಗ್ನಗೊಳಿಸಿರುವ ದುಷ್ಕೃತ್ಯವನ್ನು ಚಿತ್ತಾಪುರ ತಾಲೂಕು ಕೋಲಿ ಸಮಾಜವು ಉಗ್ರವಾಗಿ ಖಂಡಿಸುತ್ತದೆ. ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನ ಹಾಗೂ ಅವಮಾನ ಘಟನೆಯು ಇಡೀ ಕೋಲಿ, ಕಬ್ಬಲಿಗ ಸಮಾಜದ ಸ್ವಾಭಿಮಾನಕ್ಕೆ ಅಪಮಾನ ಮತ್ತು ಸಮಾಜದ ಜನತೆಯ ಭಾವನೆಗಳಿಗೆ ತೀವ್ರ ಧಕ್ಕೆಯುಂಟಾಗಿದೆ ಎಂದು ಹೇಳಿದರು.

ಸಮಾಜದಲ್ಲಿ ಸಾರ್ವಜನಿಕ ಶಾಂತಿಗೆ, ಕೋಮು ಸಾಮರಸ್ಯಕ್ಕೆ ಧಕ್ಕೆಯುಂಟು ಮಾಡುವ ಷಡ್ಯಂತರ ಅಶಾಂತಿಯ ಮತ್ತು ಕೋಮು ಸಾಮರಸ್ಯ ಕದಡಿದ್ದನ್ನು ಮತ್ತು ಕೋಲಿ ಸಮಾಜದ ಜನತೆಯ ಭಾವನೆಗಳನ್ನು ಕೆರಳಿಸಿದ್ದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

ತಾಕತ್ತಿದ್ರೆ ಮಣಿಕಂಠ ರಾಠೋಡ ಬೈರಂಗ ಚರ್ಚೆಗೆ ಬರಲಿ ಎಲ್ಲೋ ಕುಂತು ಪತ್ರಿಕಾಗೋಷ್ಠಿ, ವಾಟ್ಸಾಪ್ ಸ್ಟೇಟಸ್ ನಲ್ಲಿ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ ತಾಕತ್ತಿದ್ರೆ ಬಹಿರಂಗ ಚರ್ಚೆಗೆ ಬಂದು ಚರ್ಚೆ ಮಾಡಲಿ ಎಂದು ಸವಾಲ್ ಹಾಕಿದರು.

ಗೌರವಾಧ್ಯಕ್ಷ ರಾಮಲಿಂಗ ಬಾನರ್ ಮಾತನಾಡಿ, ಆರೋಪಿ ಯಾವುದೇ ಜಾತಿ ಜನಾಂಗಕ್ಕೆ ಸೇರಿರಲಿ ತಾರತಮ್ಯ ಮಾಡದೇ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳನ್ನು ಮತ್ತು ಅಂತಹ ಕೃತ್ಯ ಎಸಗಲು ಪರೋಕ್ಷವಾಗಿ ಪ್ರಚೋದನೆ ನೀಡಿರುವ ಸಮಾಜ ವಿರೋಧಿ ಶಕ್ತಿಗಳನ್ನು ಗುರುತಿಸಿ ಮತ್ತು ಶೀಘ್ರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಂಡು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಹೇಳಿದರು.

ಸಮಾಜದ ಮುಖಂಡರಾದ ಬಸವರಾಜ ಚಿನ್ನಮಳ್ಳಿ, ಹಣಮಂತ ಸಂಕನೂರ, ಸುರೇಶ ಬೆನಕನಳ್ಳಿ, ತಾಲೂಕು ಯುವ ಅಧ್ಯಕ್ಷ ರಾಜೇಶ ಹೋಳಿಕಟ್ಟಿ, ಅವರು ಮಾತನಾಡಿದರು. ನಗರ ಅಧ್ಯಕ್ಷ ಪ್ರಭು ಹಲಕರ್ಟಿ ಮನವಿ ಪತ್ರ ಓದಿದರು.

ತಾಲೂಕು ಅಧ್ಯಕ್ಷ ನಿಂಗಣ್ಣ ಹೆಗಲೇರಿ, ಹಿರಿಯ ಮುಖಂಡ ಮಲ್ಲಿಕಾರ್ಜುನ ಎಮ್ಮೆನೋರ್, ಪ್ರಧಾನ ಕಾರ್ಯದರ್ಶಿ ಕರಣಕುಮಾರ ಬೂನಿ ಅಲ್ಲೂರ್, ನಗರ ಯುವ ಅಧ್ಯಕ್ಷ ಬಸವರಾಜ ಮೈನಾಳಕರ್, ನಾಗೇಂದ್ರ ಜೈಗಂಗಾ, ಸೂರ್ಯಕಾಂತ ಕೊಂಕನಳ್ಳಿ, ಈರಣ್ಣ ಈಸಬಾ, ದೊಡ್ಡಪ್ಪ ಕಟ್ಟಿಮನಿ, ಕರ್ಣಪ್ಪ ಈಸಬಾ, ಶರಣು ಸಿದ್ರಾಮಗೋಳ, ಲಕ್ಷ್ಮಿಕಾಂತ್ ಸಾಲಿ, ಬಸವರಾಜ, ವೆಂಕಟರಮಣ ಬೇವಿನಗಿಡ, ಶರಣಪ್ಪ ಹೊನ್ನಪೂರ, ಶಿವಶರಣ ಮೇಂಗಾ, ಆಂಜನೇಯ ಜೀವಣಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಸಿಪಿಐ ಚಂದ್ರಶೇಖರ ತಿಗಡಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button