ರೈತರ ಪಂಪ್ಸೆಟ್ಗಳಿಗೆ ನಿರಂತರ ವಿದ್ಯುತ್ಗಾಗಿ KPRS ಪ್ರತಿಭಟನೆ
ಕಲಬುರಗಿ: ರೈತರ ಪಂಪ್ಸೆಟ್ಗಳಿಗೆ ಸಮರ್ಪಕ ಹಾಗೂ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ (KPRS) ವತಿಯಿಂದ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಸಮಯದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿರುವುದರಿಂದ ಬೆಳೆಗಳಿಗೆ ತೊಂದರೆಯಾಗುತ್ತಿದೆ. ಪಂಪ್ಸೆಟ್ಗಳಿಗೆ ವಿದ್ಯುತ್ ಲೋಡ್ಶೆಡ್ಡಿಂಗ್ ಮಾಡುತ್ತಿರುವುದನ್ನು ತಕ್ಷಣ ನಿಲ್ಲಿಸಿ, ರೈತರಿಗೆ ಸಮರ್ಪಕ ವಿದ್ಯುತ್ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಜೈ ಕಿಸಾನ್ ಘೋಷಣೆಗಳನ್ನು ಕೂಗಿ, ರೈತರ ಸಮಸ್ಯೆಗಳಿಗೆ ಸರ್ಕಾರ ಹಾಗೂ ಜೆಸ್ಕಾಂ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ರೈತರ ಕೃಷಿ ಪಂಪ್ಸೆಟ್ಗಳಿಗೆ ನಿಯಮಿತವಾಗಿ ವಿದ್ಯುತ್ ಪೂರೈಕೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು.



