ಮತದಾರರ ಪಟ್ಟಿ ಪರಿಷ್ಕರಣೆಗೆ ನಮೂನೆ-19 ಕಡ್ಡಾಯ
ಚಿತ್ತಾಪುರ:ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತ್ತು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಆದೇಶದ ಮೇರೆಗೆ, ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಹೊಸದಾಗಿ ಸಿದ್ಧಪಡಿಸಲಾಗುತ್ತಿದೆ ಎಂದು ತಹಸೀಲ್ದಾರ್ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ನಾಗಯ್ಯ ಹಿರೇಮಠ ಅವರು ಪ್ರಕಟ ಣೆಯಲ್ಲಿ ತಿಳಿಸಿದ್ದಾರೆ.
ಪರಿಷ್ಕರಣೆ ಪ್ರಕ್ರಿಯೆಯು 01.11.2025 ರ ಅರ್ಹತಾ ದಿನಾಂಕಕ್ಕೆ ಅನ್ವಯವಾಗಲಿದ್ದು, ಈ ಹಿನ್ನೆಲೆಯಲ್ಲಿ ಈ ಹಿಂದೆ ಪಟ್ಟಿಯಲ್ಲಿ ಹೆಸರು ಹೊಂದಿದ್ದ ಮತದಾರರು ಸೇರಿದಂತೆ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ನಮೂನೆ-19 ಅರ್ಜಿಯನ್ನು ಸಲ್ಲಿಸಬೇಕು. ನ. 6 ಅರ್ಜಿ ಸಲ್ಲಿಕೆಗೆ ಕೊನೆಯ ದಿನ, ನ. 25 ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ, ಡಿ. 10 ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಡಿ. 30 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.
ಕ್ಷೇತ್ರದ ಎಲ್ಲಾ ಅರ್ಹ ಮತದಾರರು ಈ ವೇಳಾ ಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು, ನಮೂನೆ-19 ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಭರ್ತಿ ಮಾಡಿ ಸಹಾಯಕ ಮತದಾರರ ನೊಂದಣಾಧಿಕಾರಿ, ಚಿತ್ತಾಪುರ ತಹಸೀಲ್ ಕಚೇರಿಯಲ್ಲಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.