ಕಲಬುರಗಿಜಿಲ್ಲೆ ಸುದ್ದಿ

ಸೆ.4ರಂದು ಶ್ರೀ ಮಹಾಲಕ್ಷ್ಮೀ ಶಕ್ತಿ ಪೀಠದಲ್ಲಿ ಪಲ್ಲಕ್ಕಿ ಉತ್ಸವ, ಗುರುವಂದನಾ ಕಾರ್ಯಕ್ರಮ

ಕಲಬುರಗಿ: ತಾಲ್ಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿರುವ ಶ್ರೀ ಮಹಾಲಕ್ಷ್ಮೀ ಶಕ್ತಿ ಪೀಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಸೆಪ್ಟೆಂಬರ್‌ 4ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಶ್ರಾವಣ ಮಾಸದ ನಾಲ್ಕನೇ ಶುಕ್ರವಾರದ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ಪಲ್ಲಕ್ಕಿ ಉತ್ಸವ ನಡೆಯಲಿದೆ. ಬಳಿಕ ಶ್ರೀದೇವಿಯ ಮಹಾಭಿಷೇಕ, ಮಹಾ ಅಲಂಕಾರ, ಮಹಾನೈವೇದ್ಯ, ವಿಶೇಷ ಅರ್ಚನೆ ಹಾಗೂ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಇದೇ ಸಂದರ್ಭದಲ್ಲಿ ಶಕ್ತಿ ಪೀಠಾಧಿಪತಿಗಳಾದ ಸದ್ಧರ್ಮ ಶಿರೋಮಣಿ ಪೂಜ್ಯ ಶ್ರೀ ಡಾ. ಅಪ್ಪಾರಾವ ದೇವಿ ಮಠ ಮಹಾರಾಜರಿಗೆ ಸುವರ್ಣ ಕಿರೀಟ ಧಾರಣೆ ಹಾಗೂ ಗುರುವಂದನಾ ಕಾರ್ಯಕ್ರಮ ನೆರವೇರಲಿದೆ.

ನಂತರ ಭಕ್ತರಿಗಾಗಿ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದ ಕೊನೆಯಲ್ಲಿ ಮಹಾಪ್ರಸಾದ ವಿತರಣೆ ಮಾಡಲಾಗುವುದು.

ಶ್ರೀ ಮಹಾಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗಲು ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಶಕ್ತಿ ಪೀಠದ ಕಾರ್ಯದರ್ಶಿ ವಿಶ್ವನಾಥ ಪಾಟೀಲ ಬೆನೂರ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button